ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ನಿಂಗವ್ವ ಸಿಂಗಾಡಿ ಅವರನ್ನು ಕಾರ್ಯಕ್ರಮದಲ್ಲಿ ಭೇಟಿ ಯಾದ ಸಿದ್ದರಾಮಯ್ಯ

Share the Post Now

ಬೆಂಗಳೂರು :ಬಸ್ಸಿನ ಮೆಟ್ಟಿಲುಗಳನ್ನು ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ನಿಂಗವ್ವ ಸಿಂಗಾಡಿ ಅವರನ್ನು ಕಾರ್ಯಕ್ರಮದಲ್ಲಿ ಭೇಟಿ ಯಾದ ಸಿದ್ದರಾಮಯ್ಯಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ನಿಂಗವ್ವ ಸಿಂಗಾಡಿ ( ಸಂಗವ್ವ ) ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿಯಾದದನ್ನು ತಮ್ಮ ಫೇಸ್ಬುಕ ಖಾತೆಯಲ್ಲಿ ಶೇರ್ ಮಾಡಿ ಖುಷಿ ಹಂಚಿಕೊಂಡಿದ್ದಾರೆ

ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾಗಿ ಫೇಸ್ಬುಕ ಖಾತೆಯಲ್ಲಿ ಶೇರ್ ಮಾಡಿದ ಅವರು ನಿಂಗವ್ವ ಸಿಂಗಾಡಿ ( ಸಂಗವ್ವ ) ಅವರನ್ನು ನೋಡಿ ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು.

ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು.

ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು.ಅರ್ಪಿಸುತ್ತೇನೆ ಎಂದರು . 

Leave a Comment

Your email address will not be published. Required fields are marked *

error: Content is protected !!