ಬೆಳಗಾವಿ.
ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಬಿಜೆಪಿ ಪಕ್ಷದ ನೂತನ ಮಂಡಲ ಅಧ್ಯಕ್ಷರಾಗಿ ಶ್ರೀಧರ ಮೂಡಲಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಯಬಾಗ ತಾಲೂಕಿನ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಅವರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂಘಟನಾ ಪರ್ವ ಸಭೆಯಲ್ಲಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಸತೀಶ ಅಪ್ಪಾಜಿಗೋಳ ಶ್ರೀಧರ ಮೂಡಲಗಿಯವರು ಮುಂದಿನ ಮೂರು ವರ್ಷಗಳ ಅವಧಿಗೆ ಕುಡಚಿ ಮಂಡಲ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ, ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಜಿಲ್ಲಾ ಚುನಾವಣೆಯ ಸಹ ಸಂಚಾಲಕ ಅಭಯ ಮಾನವಿ, ಸಂಜಯ ಪಾಟೀಲ ಶಾಲು ಹೊದಿಸಿ ಅಭಿನಂದಿಸಿದರು.
ನನ್ನ ಮೇಲೆ ಭರವಸೆ ಇಟ್ಟು ಎರಡನೆ ಬಾರಿಗೆ ನನ್ನನ್ನು ಅವಿರೋಧವಾಗಿ ಆಯ್ಕೆಮಾಡಿದ ಎಲ್ಲ ಹಿರಿಯರಿಗೂ ಕಾರ್ಯಕರ್ತರಿಗೂ ಧನ್ಯವಾದಗಳನ್ನು ತಿಳಿಸುತ್ತ ಬರುವ ದಿನಗಳಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಹಾಗೂ ಬಲಗೊಳಿಸುವಲ್ಲಿ ಅವಿರತ ಶ್ರಮ ಹಾಕುವುದಾಗಿ ತಿಳಿಸಿದರು
ಈ ಸಂದರ್ಭದಲ್ಲಿ ಮಾಜಿ ಮಂಡಲ ಅಧ್ಯಕ್ಷ ಬಸವರಾಜ ಸನದಿ, ಹಾರೂಗೇರಿ ಪುರಸಭೆ ಅಧ್ಯಕ್ಷ ವಸಂತ ಲಾಳಿ, ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಭೀಮರಾಯ ವಡೆಯರ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು
