ಬೆಳಗಾವಿ.
ಕುಡಚಿ: ವಿದ್ಯಾರ್ಥಿಗಳಿಗೆ ಶಿಸ್ತು, ಪರಿಸರ ಪ್ರೇಮ ಮತ್ತು ಸಹಬಾಳ್ವೆಯಿಂದ ಜೀವನ ನಡೆಸಲು ಎನ್ಎಸ್ಎಸ್ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಶಿಕ್ಷಣ ಪ್ರಸಾರಕ ಮಂಡಳದ ಕಾರ್ಯದರ್ಶಿಗಳಾದ ಎಸ್.ಎಸ್.ಸಿಂಗಾಡಿ ಹೇಳಿದರು.
ಅವರು ರಾಯಬಾಗ ಗ್ರಾಮೀಣ ವ್ಯಾಪ್ತಿಯ ದತ್ತು ಗ್ರಾಮವಾದ ಶಾಹುಪಾರ್ಕನ ವಿದ್ಯಾರ್ಥಿಗಳ ಉಚಿತ ವಸತಿ ನಿಲಯದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಇವರ ಸಹಯೋಗದಲ್ಲಿ ರಾಯಬಾಗ ಪಟ್ಟಣದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ
ಶಿಕ್ಷಣ ಪ್ರಸಾರಕ ಮಂಡಳದ ಕಾನೂನು ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಬಿರಾರ್ಥಿಗಳು ಶಾಹುಪಾರ್ಕನ ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿರುವುದು,ಗಿಡಗಳನ್ನು ನೆಟ್ಟಿರುವುದು,ಚಿಂತನ ಮಂಥನ ಮತ್ತು ಸಂವಾದಗಳನ್ನು ಏರ್ಪಡಿಸಿ ಜನರಲ್ಲಿ ಜಾಗೃತಿ ಮೂಡಿಸಿರುವುದು ಉತ್ತಮ ಕೆಲಸವಾಗಿದೆ. ಇಂತಹ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಿ,ಸಮಾಜದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ ಎಂದು ತಿಳಿಸಿದರು.
ಶಿಬಿರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ವಿದ್ಯಾರ್ಥಿಗಳಿಗೆ ಕಾನೂನು ಮಹಾವಿದ್ಯಾಲಯದ ವತಿಯಿಂದ ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು.
ಶಿಬಿರಾರ್ಥಿಗಳಾದ ಆಕಾಶ ಬನ್ನಹಟ್ಟಿ ಮತ್ತು ತ್ರಿವೇಣಿ ಮೊಪಗಾರ ಅವರು ಶಿಬಿರದ ಅನುಭವಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎಸ್.ಎಸ್. ಕುರಬೇಟಿ,ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮದ ಅಧಿಕಾರಿಗಳಾದ ಪ್ರೊ.ಪಿ.ಆರ್ ಸವದತ್ತಿ,ಉಪನ್ಯಾಸಕರಾದ ಎಸ್.ಎಮ್. ಲೈನದಾರ,ಆಯ್.ಆರ್ ಪತ್ತಾರ,ಎಮ್.ಆರ್ ಕಠಾರಿ, ರಾಮು ಕಾಕಡೆ,ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.