ಮಾಜಿ ಸಂಸದ ಅಮರಸಿಂಹ ಪಾಟೀಲ ಸಸಿ ನೆಡುವ ಮೂಲಕ ಪರಿಸರ ದಿನ ಆಚರಣೆ

Share the Post Now


ವರದಿ: ಸಂಜೀವ ಬ್ಯಾಕುಡೆ

ಬೆಳಗಾವಿ.
ರಾಯಬಾಗ ಪಟ್ಟಣದ ಪ್ರತಿಷ್ಟಿತ  ಶಿಕ್ಷಣ ಸಂಸ್ಥೆಯಾದ ಶಿಕ್ಷಣ ಪ್ರಸಾರಕ ಮಂಡಳದ ಕಾನೂನು ಮಹಾವಿದ್ಯಾಲಯದಲ್ಲಿ ಗುರುವಾರದಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಹಾವಿದ್ಯಾಲಯದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

ಸಸಿ ನೆಟ್ಟು ಸಸಿಗೆ ನೀರುಣಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಬ್ಯಾರಿಸ್ಟರ್ ಅಮರಸಿಂಹ ಪಾಟೀಲ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಿದೆ ಎಂದರು.

ಅಭಿವೃದ್ಧಿಯ ನೆಪದಲ್ಲಿ ದಿನ ನಿತ್ಯ ಪರಿಸರವನ್ನು ನಾಶ ಮಾಡಲಾಗುತ್ತಿದೆ, ಇದರಿಂದ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ ಜೊತೆಗೆ ನಾವು ಕೊರೋನಾ ಸಮಯದಲ್ಲಿ ಆಮ್ಲಜನಕದ ಮಹೋತ್ಸವವನ್ನು ತಿಳಿದುಕೊಂಡಂತೆ ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆ ಮರುಕಳಿಸದಂತೆ ಉತ್ತಮ ಆಮ್ಲಜನಕ, ಪರಿಸರ ಪಡೆದುಕೊಳ್ಳಲು ಹೆಚ್ಚೆಚ್ಚಾಗಿ ಗಿಡಮರಗಳನ್ನು ಬೆಳೆಸಿದರೆ ಪರಿಸರ ಸಮತೋಲನ ವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎಸ್.ಎಸ್. ಕುರಬೇಟಿ, ದೈಹಿಕ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲರಾದ ಆರ್.ಕೆ.ಪಾಟೀಲ, ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮದ ಅಧಿಕಾರಿಗಳಾದ ಪ್ರೊ.ಪಿ.ಆರ್ ಸವದತ್ತಿ,ಉಪನ್ಯಾಸಕರಾದ ಎಸ್.ಎಮ್. ಲೈನದಾರ,ಆಯ್.ಆರ್ ಪತ್ತಾರ,ಎಮ್.ಆರ್ ಕಠಾರಿ, ರಾಮು ಕಾಕಡೆ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!