ಬೆಳಗಾವಿ.
ಕುಡಚಿ: ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಾರೂಗೇರಿ ಪುರಸಭೆಯ ಸಭಾಭವನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಪುರಸಭೆಗೆ ಸಂಬಂಧ ಪಟ್ಟಂತ ಸಮಸ್ಯೆಗಳನ್ನು ಸಚಿವರು ಕೇಳಿದಾಗ ಶೈಕ್ಷಣಿಕವಾಗಿ ಅತಿ ವೇಗವಾಗಿ ಬೆಳೆಯುತ್ತಿರುವ ಪಟ್ಟಣದಲ್ಲಿ ಸುಸಜ್ಜಿತವಾದ ಸಾರ್ವಜನಿಕ ಗ್ರಂಥಾಲಯ ಅವಶ್ಯಕತೆ ಇರುವುದಾಗಿ ಮನವಿ ಸಲ್ಲಿಸಿದರು. ಅದು ಕೂಡಲೇ ಆಗಬೇಕೆಂದು ಸಚಿವರನ್ನು ಕೇಳಿದಾಗ ಸಚಿವರು ಕೂಡಲೇ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ಬಿ ಮನವಡ್ಡರ್ ಅವರಿಗೆ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚಿಸಿದರು.
ನಂತರ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪೂರೈಕೆ, ಮಂದಿರ ನಿರ್ಮಾಣಕ್ಕೆ ಹಣಕಾಸಿನ ಸಹಾಯ, ಸಿಸಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ, ವಿವಿಧ ಸೌಲಭ್ಯ ಕುರಿತು ಮನವಿ ಸಲ್ಲಿಸಿದರು.
ತಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಬಗೆಹರಿಸುವ ಭರವಸೆ ನೀಡಿದರು. ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಮೇಲಾಧಿಕಾರಿಗಳಿಗೆ ಫೋನ್ ಕರೆ ಮೂಲಕ ತಿಳಿಸಿ, ಸಮಸ್ಯೆ ಬಗೆಹರಿಸಲು ಸೂಚಿಸಿದರು.