ಖಾನಾಪುರ-ಜಾಂಬೋಟಿ-ಕಣಕುಂಬಿ-ಚೋರ್ಲಾ ರಸ್ತೆ ಹಲವು ಗುಂಡಿಗಳಿಂದ ಸಂಚಾರಕ್ಕೆ ಅಡ್ಡಿಯಾಗಿರುವ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಕಣಕುಂಬಿಯಲ್ಲಿ ರಸ್ತೆ ತಡೆ ಹಿಡಿದು ಪ್ರತಿಭಟನೆ ನಡೆಸಿದರು ಈ ಮಾರ್ಗದಲ್ಲಿ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಬೆಳಗಾವಿಯಿಂದ ಗೋವಾಕ್ಕೆ 40 ಕಿ.ಮೀ ಒಂದು ಗಂಟೆಯ ಪ್ರಯಾಣವನ್ನು ಕಡಿಮೆ ಮಾಡುವ ಜಾಂಬೋಟಿ-ಕಣಕುಂಬಿ-ಚೋರ್ಲಾ ಹೆದ್ದಾರಿಯು ಹಲವಾರು ಗುಂಡಿಗಳಿಂದ ಹದಗೆಟ್ಟಿದೆ. ಆದ್ದರಿಂದ ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸುವಂತೆ ಕಣಕುಂಬಿ, ಜಾಂಬೋಟಿ ಹಾಗೂ ಸುತ್ತಮುತ್ತಲಿನ ಚಾಲಕರು ಹಾಗೂ ಗ್ರಾಮಸ್ಥರು ಸರಕಾರಕ್ಕೆ ಹಲವು ಬಾರಿ ಒತ್ತಾಯಿಸಿದ್ದರು. ಈ ಬಗ್ಗೆ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಕ್ಯಾರೇ ಅನ್ನುತ್ತಿಲ್ಲ ದುರುಸ್ತಿ ಕುರಿತು .ಯಾವುದೇ ಕ್ರಮ ವಹಿಸಿಲ್ಲ ಆದ್ದರಿಂದ ಕಣಕುಂಬಿ, ಪರ್ವಾಡ, , ಜಾಂಬೋಟಿ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರು ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಸೋಮವಾರ ಬೆಳಗ್ಗೆ ಕಣಕುಂಬಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು . ಹೀಗಾಗಿ ಎರಡೂ ಕಡೆ ವಾಹನಗಳು ಸ್ಥಳದಲ್ಲೇ ನಿಂತವು . ಪರಿಸ್ಥಿತಿ ಹತೋಟಿಗೆ ತರಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಿಭಟನಾಕಾರರು, ಬೆಳಗಾವಿ-ಚೋರ್ಲಾ ರಸ್ತೆ ಬೃಹತ್ ಗುಂಡಿಗಳಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದೆ . ಹೀಗಾಗಿ ಕೂಡಲೇ ದುರಸ್ತಿಗೊಳಿಸುವಂತೆ ಹಲವು ಬಾರಿ ಒತ್ತಾಯಿಸಿದ್ದೇವೆ. ಆದರೆ ಅದನ್ನು ಗಮನಿಸದ ಕಾರಣ ಇಂದು ಪ್ರತಿಭಟನೆ ಆರಂಭಿಸಿದ್ದೇವೆ. ಇದರಿಂದ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿರಬಹುದು, ಆದರೆ ಅವರಿಗಾಗಿಯೇ ಈ ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಖಾನಾಪುರ ತಹಸೀಲ್ದಾರ್ ಪ್ರಕಾಶ ಗಾಯಕವಾಡ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಚರ್ಚಿಸಿದರು. ಆದಷ್ಟು ಬೇಗ ಈ ರಸ್ತೆ ದುರಸ್ತಿ ಮಾಡುವುದಾಗಿ ಭರವಸೆ ನೀಡಿದರು. ಇನ್ನೆರಡು-ಮೂರು ದಿನಗಳಲ್ಲಿ ರಸ್ತೆ ದುರಸ್ತಿ ಮಾಡದಿದ್ದರೆ ಮತ್ತೆ ರಸ್ತೆ ತಡೆದು ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು
ಈ ಸಂದರ್ಭದಲ್ಲಿ ಖಾನಾಪುರ ತಹಸೀಲ್ದಾರ್ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ರಸ್ತೆ ಗುತ್ತಿಗೆದಾರರೊಂದಿಗೆ ಮುಂದಿನ ಮೂರು ದಿನಗಳಲ್ಲಿ ರಸ್ತೆ ದುರಸ್ತಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು