
ರಾಯಬಾಗ:~* ತಾಲ್ಲೂಕಿನ ಖೇಮಲಾಪುರ ಗ್ರಾಮದ ಸಾಹಿತಿ ಹಾಗೂ ಕನ್ನಡ ಪ್ರಾಧ್ಯಾಪಕ ಡಾ.ಜಯವೀರ ಎ.ಕೆ.ಅವರ ಸುಪುತ್ರಿ ಪರಮಾನಂದವಾಡಿಯ ಶ್ರೀ ಗುರು ಸಿದ್ದೇಶ್ವರ ಅನುದಾನಿತ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 5 ನೇ ವರ್ಗದ ವಿದ್ಯಾರ್ಥಿನಿ ಕು.ಪ್ರಜ್ಞಾ ಜಯವೀರ ಕಾಂಬಳೆ ಪ್ರಸಕ್ತ ಸಾಲಿಗೆ ತಾಲ್ಲೂಕಿನ ಕಪ್ಪಲಗುದ್ದಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ (6 ನೇ ತರಗತಿಗೆ) ಆಯ್ಕೆಯಾಗಿದ್ದಾಳೆ. ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಈ ಅಪೂರ್ವ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದ ಪ್ರತಿಭಾವಂತ ವಿದ್ಯಾರ್ಥಿನಿ ಕು.ಪ್ರಜ್ಞಾಳನ್ನು ಶಾಲೆಯ ಮುಖ್ಯೋಪಾಧ್ಯಾಯರು, ಸಮಸ್ತ ಶಿಕ್ಷಕ ಸಿಬ್ಬಂದಿ ಹಾಗೂ ಮಗುವಿನ ಪಾಲಕರು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.
ವರದಿ:~ಡಾ.ಜಯವೀರ ಎ.ಕೆ*
*ಖೇಮಲಾಪುರ*




