ವರದಿ ಮುರಿಗೆಪ್ಪ ಮಾಲಗಾರ
ಬೆಳಗಾವಿ.ಹಳ್ಳೂರ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳ್ಳೂರ್ ಕ್ರಾಸ್ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆಯನ್ನು ನೆರವೇರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮಾತನಾಡಿ ಇಂದಿನ ಆಧುನಿಕ ತಂತ್ರಜ್ಞಾನ ವ್ಯವಸ್ಥೆಯಲ್ಲಿ ಶಿಕ್ಷಣದ ಪ್ರಗತಿ ಮುಂಚೂಣಿಯಲ್ಲಿ ಇರಬೇಕಾದರೆ ಪ್ರತಿಯೊಂದು ಕ್ಷೇತ್ರದಲ್ಲಿ ಬೋಧನೆಗೆ ಪೂರಕವಾಗಿ ಸ್ಮಾರ್ಟ್ ಕ್ಲಾಸ್ ಬಳಕೆ ಬಹಳ ಅವಶ್ಯಕವಾಗಿದೆ. ‘ಆಡು ಮುಟ್ಟದ ಸೊಪ್ಪಿಲ್ಲ ತಂತ್ರಜ್ಞಾನವಿಲ್ಲದ ಕ್ಷೇತ್ರವಿಲ್ಲ’ ಎಂಬಂತೆ ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಅಳವಡಿಕೆ ಮಕ್ಕಳಿಗೆ ಭಿನ್ನ ರೀತಿಯ ಅನುಭವದ ಮೂಲಕ ಕಲಿಕೆಯನ್ನು ದೃಢೀಕರಿಸಲು ಸಹಕಾರಿಯಾಗುತ್ತದ ಎಂದು ಹೇಳಿ ಹರ್ಷ ವ್ಯಕ್ತಪಡಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿಗಳಾದ ಆರ್. ಎಂ. ಆನಿ ಮಾತನಾಡಿ ಮಕ್ಕಳಿಗೆ ನೈಜ ಅನುಭವಾತ್ಮಕ ಮತ್ತು ಪರಿಣಾಮಕಾರಿ ಕಲಿಕೆಗೆ ತಂತ್ರಜ್ಞಾನದ ಬಳಕೆಯೊಂದಿಗೆ ಪಾಠ ಮಾಡಿದರೆ ಮಕ್ಕಳಿಗೆ ಅರ್ಥಪೂರ್ಣವಾಗುತ್ತದೆ ಎಂದು ಹೇಳಿ ಶಿಕ್ಷಕರ ಕಾರ್ಯವನ್ನು ಶ್ಲಾಘಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ರಾಜು ಪಾನಾರೆ ಇವರು ಶಾಲೆಯ ಅಭಿವೃದ್ಧಿ ಹಾಗೂ ಸಮುದಾಯದ ಸಹಭಾಗಿತ್ವವನ್ನು ಕುರಿತು ಮಾತನಾಡಿದರು. ಶಾಲೆಯ ಎಸ್ ಡಿ ಎಂ ಸಿ ಸದಸ್ಯರಾದ ಶ್ರೀ ಮಲ್ಲಿಕಾರ್ಜುನ್ ಮಠಪತಿ ಅವರು ಶಾಲಾ ಮಕ್ಕಳ ಕಲಿಕೆ ತುಂಬಾ ಪರಿಣಾಮಕಾರಿಯಾಗಿ ಬದಲಾವಣೆಯಾಗುತ್ತಿದೆ, ಶಿಕ್ಷಕರು ಉತ್ತಮವಾಗಿ ಮಕ್ಕಳಿಗೆ ಪಾಠ ಬೋಧನೆ ಮಾಡುತ್ತಿದ್ದಾರೆ ಶಾಲೆಯಲ್ಲಿ ಹೆಚ್ಚುವರಿ ತರಗತಿಗಳನ್ನು ಆಯೋಜಿಸುತ್ತಿರುವುದು ಶಾಲಾ ಶಿಕ್ಷಕರ ಬಗ್ಗೆ ಹೆಮ್ಮೆ ಪಡುವ ವಿಷಯವಾಗಿದೆ ಎಂದು ವಿಚಾರಗಳನ್ನು ವ್ಯಕ್ತಪಡಿಸಿದರು.
ಶಾಲೆಯ ಮುಖ್ಯ ಗುರುಗಳಾದ ಶ್ರೀ ಬಸವರಾಜ ಪಾಟೀಲ ಗುರುಗಳು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕ್ಲಸ್ಟರ್ನ ಎಲ್ಲಾ ಶಾಲೆಯ ಪ್ರಧಾನ ಗುರುಗಳು, ಊರಿನ ಪ್ರಮುಖರು, ಮಕ್ಕಳ ಪಾಲಕರು, ತಾಯಿಂದಿರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಎಸ್ ವೈ ಮರಕ್ಕನವರ ಶಿಕ್ಷಕರು ನಿರೂಪಣೆ ಮಾಡಿದರು ಎಂ ಬಿ ತಳವಾರ ಶಿಕ್ಷಕರು ವಂದಿಸಿದರು.